"ರಂಗ್ ದೇ ಬಸಂತಿ..."
ಸ್ವಾತಂತ್ರ್ಯ ಉದ್ಯಾನವನದಲ್ಲಿ ಎರಡನೇ ಸ್ವಾತಂತ್ರ್ಯ ಚಳುವಳಿಯ ಭಾಗವಾಗಿ ಸತ್ಯಾಗ್ರಹಿಗಳ ಜತೆಗೆ ಒಂದಿಡೀ ದಿನವನ್ನು ಜೀವಿಸಿದ್ದು ಮನಸಿಗೆ ಹೆಮ್ಮೆಯ ಭಾವವನ್ನು ಮೂಡಿಸಿದ್ದು ಸತ್ಯವೇ ಆದರೂ...
ನನಗೀಗಲೂ ಅನ್ನಿಸುತ್ತಿಲ್ಲ -
ನಾನು ದೇಶ ಸೇವೆ ಅಥವಾ ಸಮಾಜ ಸೇವೆಯಲ್ಲಿ ತೊಡಗಿಕೊಂಡೆನೆಂದು...
ಅನ್ನಿಸಿದ್ದಿಷ್ಟೇ -
ನಾನು - ನನ್ನ ನಾಳೆಗಳ ಒಳಿತಿಗಾಗಿ ನನ್ನ ಸುತ್ತಲಿನ ಪರಿಸರವನ್ನು ಶುದ್ಧವಾಗಿಸಿಕೊಳ್ಳಲೋಸುಗ ನನ್ನ ಇಂದಿನ ಒಂದಷ್ಟು ಘಂಟೆಗಳನ್ನು
ಸದ್ವಿನಿಯೋಗಪಡಿಸಿಕೊಂಡೆನೆಂದು.
ಅಲ್ಲಿ -
ಅಣ್ಣಾ ಹಜಾರೆಯವರಂಥ ಅಷ್ಟೆಲ್ಲ ಹಿರಿಯ ಜೀವಗಳು ನಮ್ಮ ನಾಳೆಗಳಿಗಾಗಿ ಊಟ, ನಿದ್ದೆ ಬಿಟ್ಟು ಕೂತಿದ್ದಾರೆ.
ಬದುಕಿನ ಕೊನೆಯ ಘಟ್ಟದಲ್ಲಿರುವ ಅವರುಗಳ ನಾಳೆಗಳೆಂದರೆ ನಾವುಗಳೇ ತಾನೆ...!!!
ಅವರನ್ನು ಬೆಂಬಲಿಸಿ ಅವರ ಪರಿಶ್ರಮ ವಿಫಲವಾಗದಂತೆ ನೋಡಿಕೊಳ್ಳಬೇಕಾದದ್ದು ನಮ್ಮ ಹೊಣೆ ಅಲ್ಲವಾ...!!!
ನಂಗೊತ್ತು -
ನಮ್ಮ ನಿತ್ಯದ ಬದುಕಿನ ಜಂಜಡಗಳು ನಮಗೆ ನಿತ್ಯವೂ ಅವರೊಂದಿಗೆ ನೇರವಾಗಿ ಬೆರೆತಿರುವಷ್ಟು ಸಮಯ ಮತ್ತು ಅವಕಾಶ ಕೊಡಲಾರವು ಅಂತ.
ಆದರೂ,
ಎಲ್ಲ ಜಂಜಡಗಳ ನಡುವೆಯೇ ಒಂದಿಷ್ಟು ಸಮಯಾನ ಹೆಕ್ಕಿ ಸತ್ಯಾಗ್ರಹಿಗಳಿರುವಲ್ಲಿ ಹೋಗಿ
ಅವರ ಜಯಘೋಷದೊಂದಿಗೆ ನಮ್ಮದೂ ದನಿ ಸೇರಿಸಿ
ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳಿ ಬಂದರೆ
ಉಪವಾಸದಿಂದ ಬಳಲಿದ ಆ ಜೀವಗಳಲ್ಲಿ ಒಂದಷ್ಟು ಚೈತನ್ಯ ಮೈಗೂಡೀತು...
ಗೆಲುವು ಸುಲಭಸಾಧ್ಯವಾದೀತು...ಅಲ್ಲವಾ...!!!
ಹೇಗಾದರಾಗಲಿ -
ನಮ್ಮ ನಮ್ಮ ಅವಕಾಶಗಳ ಪರಿಧಿಯಲ್ಲಿ
ನಮ್ಮ ನಮ್ಮ ಅರಿವಿನ ವ್ಯಾಪ್ತಿಯಲ್ಲಿ
ಯಾವುದೇ ರೀತಿಯಲ್ಲಾದರೂ
ಪ್ರತ್ಯಕ್ಷವಾಗಿ ಇಲ್ಲವೇ ಪರೋಕ್ಷವಾಗಿಯಾದರೂ
ಹೋರಾಟವನ್ನು ಬೆಂಬಲಿಸೋಣ...
ನಾಳೆಗಳನ್ನು ಚೆಂದವಾಗಿಸಿಕೊಳ್ಳವ ಕನಸಿಗೆ ಜೀವತುಂಬೋಣ...
ದಯವಿಟ್ಟು ಸತ್ಯಾಗ್ರಹವನ್ನು ಬೆಂಬಲಿಸಿ...
ವಿಶ್ವಾಸ ವೃದ್ಧಿಸಲಿ...
ಜೈ ಹೋ...
ಸ್ವಾತಂತ್ರ್ಯ ಉದ್ಯಾನವನದಲ್ಲಿ ಎರಡನೇ ಸ್ವಾತಂತ್ರ್ಯ ಚಳುವಳಿಯ ಭಾಗವಾಗಿ ಸತ್ಯಾಗ್ರಹಿಗಳ ಜತೆಗೆ ಒಂದಿಡೀ ದಿನವನ್ನು ಜೀವಿಸಿದ್ದು ಮನಸಿಗೆ ಹೆಮ್ಮೆಯ ಭಾವವನ್ನು ಮೂಡಿಸಿದ್ದು ಸತ್ಯವೇ ಆದರೂ...
ನನಗೀಗಲೂ ಅನ್ನಿಸುತ್ತಿಲ್ಲ -
ನಾನು ದೇಶ ಸೇವೆ ಅಥವಾ ಸಮಾಜ ಸೇವೆಯಲ್ಲಿ ತೊಡಗಿಕೊಂಡೆನೆಂದು...
ಅನ್ನಿಸಿದ್ದಿಷ್ಟೇ -
ನಾನು - ನನ್ನ ನಾಳೆಗಳ ಒಳಿತಿಗಾಗಿ ನನ್ನ ಸುತ್ತಲಿನ ಪರಿಸರವನ್ನು ಶುದ್ಧವಾಗಿಸಿಕೊಳ್ಳಲೋಸುಗ ನನ್ನ ಇಂದಿನ ಒಂದಷ್ಟು ಘಂಟೆಗಳನ್ನು
ಸದ್ವಿನಿಯೋಗಪಡಿಸಿಕೊಂಡೆನೆಂದು.
ಅಲ್ಲಿ -
ಅಣ್ಣಾ ಹಜಾರೆಯವರಂಥ ಅಷ್ಟೆಲ್ಲ ಹಿರಿಯ ಜೀವಗಳು ನಮ್ಮ ನಾಳೆಗಳಿಗಾಗಿ ಊಟ, ನಿದ್ದೆ ಬಿಟ್ಟು ಕೂತಿದ್ದಾರೆ.
ಬದುಕಿನ ಕೊನೆಯ ಘಟ್ಟದಲ್ಲಿರುವ ಅವರುಗಳ ನಾಳೆಗಳೆಂದರೆ ನಾವುಗಳೇ ತಾನೆ...!!!
ಅವರನ್ನು ಬೆಂಬಲಿಸಿ ಅವರ ಪರಿಶ್ರಮ ವಿಫಲವಾಗದಂತೆ ನೋಡಿಕೊಳ್ಳಬೇಕಾದದ್ದು ನಮ್ಮ ಹೊಣೆ ಅಲ್ಲವಾ...!!!
ನಂಗೊತ್ತು -
ನಮ್ಮ ನಿತ್ಯದ ಬದುಕಿನ ಜಂಜಡಗಳು ನಮಗೆ ನಿತ್ಯವೂ ಅವರೊಂದಿಗೆ ನೇರವಾಗಿ ಬೆರೆತಿರುವಷ್ಟು ಸಮಯ ಮತ್ತು ಅವಕಾಶ ಕೊಡಲಾರವು ಅಂತ.
ಆದರೂ,
ಎಲ್ಲ ಜಂಜಡಗಳ ನಡುವೆಯೇ ಒಂದಿಷ್ಟು ಸಮಯಾನ ಹೆಕ್ಕಿ ಸತ್ಯಾಗ್ರಹಿಗಳಿರುವಲ್ಲಿ ಹೋಗಿ
ಅವರ ಜಯಘೋಷದೊಂದಿಗೆ ನಮ್ಮದೂ ದನಿ ಸೇರಿಸಿ
ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳಿ ಬಂದರೆ
ಉಪವಾಸದಿಂದ ಬಳಲಿದ ಆ ಜೀವಗಳಲ್ಲಿ ಒಂದಷ್ಟು ಚೈತನ್ಯ ಮೈಗೂಡೀತು...
ಗೆಲುವು ಸುಲಭಸಾಧ್ಯವಾದೀತು...ಅಲ್ಲವಾ...!!!
ಹೇಗಾದರಾಗಲಿ -
ನಮ್ಮ ನಮ್ಮ ಅವಕಾಶಗಳ ಪರಿಧಿಯಲ್ಲಿ
ನಮ್ಮ ನಮ್ಮ ಅರಿವಿನ ವ್ಯಾಪ್ತಿಯಲ್ಲಿ
ಯಾವುದೇ ರೀತಿಯಲ್ಲಾದರೂ
ಪ್ರತ್ಯಕ್ಷವಾಗಿ ಇಲ್ಲವೇ ಪರೋಕ್ಷವಾಗಿಯಾದರೂ
ಹೋರಾಟವನ್ನು ಬೆಂಬಲಿಸೋಣ...
ನಾಳೆಗಳನ್ನು ಚೆಂದವಾಗಿಸಿಕೊಳ್ಳವ ಕನಸಿಗೆ ಜೀವತುಂಬೋಣ...
ದಯವಿಟ್ಟು ಸತ್ಯಾಗ್ರಹವನ್ನು ಬೆಂಬಲಿಸಿ...
ವಿಶ್ವಾಸ ವೃದ್ಧಿಸಲಿ...
ಜೈ ಹೋ...